ತಿರುವನಂತಪುರಂ, ಡಿ 21 (DaijiworldNews/SM): ಈ ವರ್ಷ ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಭಕ್ತರ ಭಾರೀ ನೂಕುನುಗ್ಗಲು ಕಂಡುಬಂದಿದೆ ಎಂದು ದೇವಾಲಯದ ಆಡಳಿತ ಸಮಿತಿಯ ಅಧಿಕೃತ ಹೇಳಿಕೆ ತಿಳಿಸಿದೆ.
ಡಿಸೆಂಬರ್ 11ರಿಂದ ದೇವಾಲಯಕ್ಕೆ ಭಾರೀ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದು, ಡಿಸೆಂಬರ್ 12 ರಂದು ಗರಿಷ್ಠ 1.07 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ಡಿಸೆಂಬರ್ 13 ಮತ್ತು 14 ರಂದು ದೇವಸ್ಥಾನಕ್ಕೆ ಕ್ರಮವಾಗಿ 77,216 ಮತ್ತು 64,617 ಭಕ್ತರು ಭೇಟಿ ನೀಡಿದ್ದರು.
ಡಿಸೆಂಬರ್ 12 ರಂದು ಒಂದು ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರಿಂದ ಅಯ್ಯಪ್ಪ ದೇವರ ದರ್ಶನಕ್ಕಾಗಿ ದೇವಾಲಯವು ದಾಖಲೆಯ ಜನರನ್ನು ಕಂಡಿತು. ಅಯ್ಯಪ್ಪನ ದರ್ಶನಕ್ಕಾಗಿ 1,07,260 ಭಕ್ತರು ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಿದ್ದಾರೆ. ಅದೇ ರೀತಿ ಡಿಸೆಂಬರ್ 11 ರಂದು ಸುಮಾರು 60,000 ಜನರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.
ಭಾರೀ ಜನಸಂದಣಿಯನ್ನು ಪರಿಗಣಿಸಿ, ಭಕ್ತರ ಸುರಕ್ಷತೆಯನ್ನು ಖಾತ್ರಿಪಡಿಸಲು ದೇವಾಲಯದ ಆಡಳಿತ ಮಂಡಳಿಯಿಂದ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನೂಕುನುಗ್ಗಲು ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಕ್ತರನ್ನು ಪಂಪಾದಿಂದ ಸನ್ನಿಧಾನಕ್ಕೆ ನಿಯಂತ್ರಿತ ಮತ್ತು ವಿಭಾಗೀಯ ರೀತಿಯಲ್ಲಿ ಬೆಂಗಾವಲು ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತಿ ಹಂತದಲ್ಲೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಶಬರಿಮಲೆ ವಿಶೇಷ ಅಧಿಕಾರಿ ಹರಿಶ್ಚಂದ್ರ ನಾಯಕ್ ತಿಳಿಸಿದ್ದಾರೆ