ಬೆಂಗಳೂರು, ಡಿ 21 ( DaijiworldNews/MS): ನೆರೆ ರಾಷ್ಟ್ರ ಚೀನಾದಲ್ಲಿ ಕೋವೀಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ರಾಜ್ಯಗಳು ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸೂಚಿಸಿದೆ. ಈ ಎಚ್ಚರಿಕೆಯನ್ನು ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ.
ಈ ನಡುವೆ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಯಾಗಲಿದೆಯಾ ಎನ್ನುವ ಕೂತೂಹಲ ಮೂಡಿಸಿದೆ.