ಚಂಡೀಗಢ, ಡಿ 22 (daijiworldNews/HR): ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಅಹಿರ್ವಾರ್ ಅವರು ಶೂ ಲೇಸ್ ಕಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಹರಿಯಾಣದಲ್ಲಿ ಸಾಗುತ್ತಿರುವ ಪಾದಯಾತ್ರೆ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಅಹಿರ್ವಾರ್ ಅವರು ರಾಹುಲ್ ಗಾಂಧಿ ಎದುರು ಮಂಡಿಯೂರಿ ಕುಳಿತು ಶೂ ಲೇಸ್ ಕಟ್ಟಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ ಅವರು ವಿಡಿಯೊವನ್ನು ಟ್ವೀಟ್ ಮಾಡಿದದು, ರಾಹುಲ್ ನಡೆಯನ್ನು ಖಂಡಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರದಾಡುತ್ತಿದೆ.
ಇನನು ಇದಕ್ಕೆ ಪ್ರತಿಕ್ರಿಯೆ ನಿಡಿರುವ ಜಿತೇಂದ್ರ ಸಿಂಗ್ ಅವರು, ನಾನು ನನ್ನ ಶೂ ಲೇಸ್ ಕಟ್ಟಿಕೊಳ್ಳುತ್ತಿದ್ದೆ ರಾಹುಲ್ ಗಾಂಧಿಯವರದ್ದಲ್ಲ ಎಂದು ಹೇಳಿದ್ದಾರೆ.