ನವದೆಹಲಿ, ಡಿ 22 (DaijiworldNews/DB): ವಿಶ್ವದ ವಿವಿಧೆಡೆ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಸಂಸದರು ಇಂದು ಮಾಸ್ಕ್ ಧರಿಸಿ ರಾಜ್ಯಸಭೆ ಕಲಾಪಗಳಲ್ಲಿ ಭಾಗವಹಿಸಿದರು.
ಚಳಿಗಾಲದ ಅಧಿವೇಶನದಲ್ಲಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವರು ಮಾಸ್ಕ್ ಧರಿಸಿ ಕಲಾಪಕ್ಕೆ ಆಗಮಿಸಿದರು.
ಈ ವೇಳೆ ಮಾತನಾಡಿದ ಸ್ಪೀಕರ್ ಓಂ ಬಿರ್ಲಾ, ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಕೋವಿಡ್ ಉಲ್ಬಣಗೊಳ್ಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನದಟ್ಟಣೆ ಇರುವಲ್ಲಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಹಾಗೆಯೇ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ದೇಶದ ಜನತೆಗೆ ಹೇಳಲಾಗಿದೆ ಎಂದರು.
ಲೋಕಸಭಾ ಚೇಂಬರ್ನ ಪ್ರವೇಶ ಸ್ಥಳದಲ್ಲಿ ಸಂಸದರಿಗೆ ಮಾಸ್ಕ್ಗಳನ್ನು ಒದಗಿಸಲಾಗುತ್ತಿದೆ. ಎಲ್ಲರೂ ಅದನ್ನು ಪಡೆದುಕೊಂಡು ಧರಿಸಿಕೊಳ್ಳಬೇಕು ಎಂದವರು ಇದೇ ವೇಳೆ ಮನವಿ ಮಾಡಿದರು.