ಮಹಾರಾಷ್ಟ್ರ, ಡಿ 22 (daijiworldNews/HR): ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಸರ್ಕಾರ ಕೊರೊನಾ ಸೋಂಕು ಬಿಡುಗಡೆ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಅಥವಾ ಮುಂದೂಡುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಕಳುಹಿಸಿರುವ ಪತ್ರದ ಕುರಿತು ಪ್ರತಿಕ್ರಿಯಿಸಿರುವ ಉದ್ಧವ್ ಠಾಕ್ರೆ, ಭಾರತ್ ಜೋಡೋ ಯಾತ್ರೆಯ 100 ದಿನಗಳನ್ನು ಪೂರೈಸಿದ್ದು, ದೊಡ್ಡ ಮಟ್ಟದಲ್ಲಿ ಜನಬೆಂಬಲ ಪಡೆಯುತ್ತಿದ್ದಾರೆ. ಸರ್ಕಾರವು ಕಾನೂನಿನ ಮೂಲಕ ಅಥವಾ ಪಿತೂರಿಯಿಂದ ಅದನ್ನು ತಡೆಯಲು ಸಾಧ್ಯವಾಗಲಿಲ್ಲ ಆದ್ದರಿಂದ ಕೇಂದ್ರ ಸರ್ಕಾರವು 'ಕೊರೊನಾವೈರಸ್ ಅನ್ನು ಬಿಡುಗಡೆ ಮಾಡಿದೆ ಎಂದಿದ್ದಾರೆ.
ಇನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, ಪಕ್ಷದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕೇಳಿದ್ದಾರೆ.