ನವದೆಹಲಿ, ಡಿ 23 (DaijiworldNews/DB): ಕೊರೊನಾ ವೈರಸ್ ಪರಿಸ್ಥಿತಿ ಎದುರಿಸಲು ದೇಶ ಎಲ್ಲಾ ರೀತಿಯಲ್ಲಿ ಸಿದ್ದಗೊಂಡಿದೆ. ಜನರಿಗೆ ಆತಂಕ ಅನಗತ್ಯ ಎಂದು ನಾಗರಿಕ ವಿಮಾನಯಾನ ಮತ್ತು ಉಕ್ಕು ಸಚಿವಾಲಯಗಳ ಖಾತೆಯ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.
ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಕೈಗೊಂಡ ಉಪಕ್ರಮಗಳನ್ನು ವಿವರಿಸುವ ವೇಳೆ ಮಾತನಾಡಿದ ಅವರು, ದೇಶದ ಎಲ್ಲಾ ಜನರ ಆರೋಗ್ಯ ರಕ್ಷಣೆ ಮಾಡುವತ್ತ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಗಮನವಿದೆ. ಕೊರೊನಾ ಪರಿಸ್ಥಿತಿಯನ್ನು ಎದುರಿಸಲು ದೇಶ ಸಿದ್ದವಾಗಿದೆ ಎಂದರು.
ಲಭ್ಯತೆ, ಕೈಗೆಟಕುವಿಕೆ, ಖಚಿತ ಗುಣಮಟ್ಟ, ಡಿಜಿಟಲ್ ವಿತರಣೆಯು ಸರ್ಕಾರದ ಆರೋಗ್ಯ ಕಾರ್ಯಕ್ರಮದ ಆಧಾರಸ್ಥಂಭಗಳಾಗಿವೆ. ಒಂದು ರಾಷ್ಟ್ರ, ಒಂದು ಆರೋಗ್ಯ ದೃಷ್ಟಿಕೋನದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಒಟ್ಟಾಗಿ ನಿಭಾಯಿಸಿದ್ದೇವೆ. ಮುಂದೆಯೂ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ನಾವು ಸಿದ್ದರಾಗಿದ್ದೇವೆ ಎಂದವರು ತಿಳಿಸಿದರು.
ಒಟ್ಟಾರೆ 220 ಕೋಟಿ ಡೋಸ್ ಲಸಿಕೆಗಳನ್ನು ಜನರಿಗೆ ವಿತರಿಸಲಾಗಿದೆ. ಚೀನಾದಲ್ಲಿ ಕೋವಿಡ್ ಉಲ್ಬಣಗೊಂಡು ಪರಿಸ್ಥಿತಿ ಹದಗೆಟ್ಟಿದೆ. ಭಾರತದಲ್ಲಿ ವ್ಯಾಕ್ಸಿನೇಶನ್ ಮೂಲಕ ಜನರು ಸುರಕ್ಷಿತವಾಗಿದ್ದಾರೆ ಎಂದವರು ಪ್ರತಿಪಾದಿಸಿದರು.