ನವದೆಹಲಿ, ಡಿ 23 ( DaijiworldNews/MS): ಹರಿಯಾಣದ ಫರಿದಾಬಾದ್ನಲ್ಲಿರುವ ಭಾರತ್ ಜೋಡೊ ಯಾತ್ರೆಯು ಶನಿವಾರ ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಲಿದೆ.
ಕನ್ಯಾಕುಮಾರಿ-ಕಾಶ್ಮೀರದವರೆಗಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ, ಸೆಪ್ಟೆಂಬರ್ 7 ರಂದು ಪ್ರಾರಂಭವಾಗಿದ್ದು, ಇದುವರೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಹಾದುಹೋಗಿದೆ.
"ಹರಿಯಾಣದ ಫರಿದಾಬಾದ್ನಲ್ಲಿರುವ ಯಾತ್ರೆಯು ಬದರ್ಪುರ್ ಗಡಿ (ಬದರ್ಪುರ್ ಮೊಟ್ರೊ ನಿಲ್ದಾಣದ ಸಮೀಪ) ಮೂಲಕ ದೆಹಲಿಯತ್ತ ಸಾಗಲಿದ್ದು ನಿಜಾಮುದ್ದಿನ್, ಇಂಡಿಯಾ ಗೇಟ್ ಸರ್ಕಲ್, ಐಟಿಒ, ದೆಹಲಿ ಕೌಂಟ್, ದರಿಯಾಗಂಜ್ ನಂತರ ಕೆಂಪು ಕೋಟೆಯತ್ತ ಯಾತ್ರೆಯು ಸಾಗಲಿದೆ. ಜನವರಿ 3ರ ವರೆಗೆ ಉತ್ತರ ಪ್ರದೇಶದಲ್ಲಿ ಇರಲಿದೆ. ಬಳಿಕ ಪುನಃ ಹರಿಯಾಣಕ್ಕೆ ಹಿಂತಿರುಗಿ ಪಂಜಾಬ್ ಮೂಲಕ ಜಮ್ಮು ಮತ್ತು ಕಾಶ್ಮೀರದತ್ತ ಯಾತ್ರೆ ಸಾಗಲಿದೆ" ಎಂದು ಹರಿಯಾಣದ ಎಐಸಿಸಿ ವಕ್ತಾರ ಶಕ್ತಿಸಿನ್ಹ ಗೊಹಿಲ್ ಮಾಹಿತಿ ನೀಡಿದ್ದಾರೆ.