ನವದೆಹಲಿ, ಡಿ 25 (DaijiworldNews/HR): ಬೇರೆ ದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದಂತೆಯೇ ಭಾರತದ ಜನರು 'ಹೈಬ್ರಿಡ್ ಇಮ್ಯುನಿಟಿ' ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದಾರೆ ಎಂದು ಏಮ್ಸ್ನ ಮಾಜಿ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಾರತದ ಕೊರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವ ಅಗತ್ಯವಿಲ್ಲ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವಲ್ಲಿ ವಿಮಾನಗಳನ್ನು ನಿಷೇಧಿಸುವುದು ತುಂಬಾ ಪರಿಣಾಮಕಾರಿಯಲ್ಲ ಎಂದರು.
ಇನ್ನು ಲಾಕ್ಡೌನ್ ಮಾಡುವ ಅಗತ್ಯವಿಲ್ಲ. ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಪರಿಗಣಿಸಿದರೆ, ಭಾರತದಲ್ಲಿ ತೀವ್ರ ಪ್ರಕರಣಗಳು ಮತ್ತು ಕೋವಿಡ್ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಕಡಿಮೆಯಾಗಿದೆ ಏಕೆಂದರೆ ಭಾರತೀಯ ಜನಸಂಖ್ಯೆಯು ಈಗಾಗಲೇ ಉತ್ತಮ ವ್ಯಾಕ್ಸಿನೇಷನ್ ಪಡೆದಿದ್ದಾರೆ ಮತ್ತು ಹೈಬ್ರಿಡ್ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.