ಮೂಡಿಗೆರೆ, ಡಿ 26 (DaijiwordNews/HR): ಮೂಡಿಗೆರೆ ತಾಲೂಕಿನ ಬಣಕಲ್ ಪಶು ಆಸ್ಪತ್ರೆ ಸಮೀಪ ಟೆಂಟ್ ಹಾಕಿಕೊಂಡು ಮಲಗಿದವರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಹಾಗೂ ಗಂಡುಗುಸೆ ಎಂಬುವರು ಚಿಂದಿ ಆರಿಸಲು ಬಂದಿದ್ದು ಬಣಕಲ್ ಪಶು ಆಸ್ಪತ್ರೆ ಸಮೀಪ ಟೆಂಟ್ ಹಾಕಿಕೊಂಡು ಮಲಗಿದ್ದರು ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.
ಇನ್ನು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ನಾಗವಲ್ಲಿ ಎಂಬವರಿಗೆ ಸೊಂಟ ಹಾಗು ಎದೆ ಭಾಗಕ್ಕೆ ಪೆಟ್ಟಾಗಿದ್ದು ಗಂಡುಗುಸೆ ಎಂಬುವರಿಗೆ ಕಾಲಿಗೆ ಪೆಟ್ಟಾಗಿದ್ದು, ಅವರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ.