ಮುಂಬೈ, ಡಿ 26 (DaijiworldNews/DB): ಗಡಿ ವಿವಾದ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ಹೊರ ಬೀಳುವವರೆಗೂ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ ಎಂದು ಶಿವಸೇನೆ ನಾಯಕ ಉದ್ದವ್ ಠಾಕ್ರೆ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಗೆ ಈ ಒತ್ತಾಯ ಮಂಡಿಸಿರುವ ಅವರು, ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದಾರೆ. ಆದರೆ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮೌನವಾಗಿದ್ದಾರೆ. ಸುಪ್ರೀಂ ತೀರ್ಪು ಬರುವವರೆಗೆ ಈ ಮೂರು ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವುದರೊಂದಿಗೆ ಸದನ ಈ ಪ್ರಸ್ತಾವನೆಯನ್ನು ಅಂಗೀಕಾರ ಮಾಡಬೇಕೆಂದು ಒತ್ತಾಯಿಸಿದರು.
ಇನ್ನು ಉದ್ದವ್ ಠಾಕ್ರೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಗಡಿ ನಿವಾಸಿಗಳ ವಿರುದ್ದ ಆಗುವ ಅನ್ಯಾಯಕ್ಕೆ ಹೋರಾಟ ಮಾಡುತ್ತೇವೆ. ಒಂದಿಂಚು ಭೂಮಿಗೂ ಹೋರಾಟ ನಿರಂತರ. ಅದು ಸುಪ್ರೀಂಕೋರ್ಟ್ನಲ್ಲೇ ಆಗಲಿ, ಕೇಂದ್ರದಲ್ಲೇ ಆಗಲಿ ಹೋರಾಟ ಬಿಡುವುದಿಲ್ಲ ಎಂದರು.