ನವದೆಹಲಿ, ಡಿ 26 (DaijiworldNews/DB): ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ವಿರುದ್ದ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣವನ್ನು ಮತ್ತೆ ತನಿಖೆ ನಡೆಸಲು ಸಿಬಿಐ ಮುಂದಾಗಿದೆ.
ಬಿಜೆಪಿ ಕೈಬಿಟ್ಟು ಆರ್ಜೆಡಿಯೊಂದಿಗೆ ಸರ್ಕಾರ ರಚಿಸಲು ಕೈ ಜೋಡಿಸಿದ ಒಂದು ತಿಂಗಳ ನಂತರ ಲಾಲು ಪ್ರಸಾದ್ ಯಾದವ್ ಅವರ ವಿರುದ್ದದ ಪ್ರಕರಣ ರೀ ಓಪನ್ ಆಗಿದೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಲಾಲು ಪ್ರಸಾದ್ ಯಾದವ್, ತಮ್ಮ ಪಕ್ಷವನ್ನು ವಿಭಜನೆಗೊಳಿಸಿ ಬಿಜೆಪಿ ಯೋಜಿಸಿದೆ ಎಂದು ಆಪಾದಿಸಿದ್ದಾರೆ.
ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ವೇಳೆ 2018ರಲ್ಲಿ ಲಾಲೂ ಪ್ರಸಾದ್ ಅವರು ರೈಲ್ವೇ ಖಾತೆಯನ್ನು ನಿಭಾಯಿಸುತ್ತಿದ್ದರು. ಈ ವೇಳೆ ರೈಲ್ವೇ ಯೋಜನೆಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ಕುರಿತು ಸಿಬಿಐ ತನಿಖೆ ಆರಂಭಿಸಿತ್ತು.
ಇನ್ನು ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಪುತ್ರ ತೇಜಸ್ವಿ ಯಾದವ್ ಮತ್ತು ಪುತ್ರಿಯರಾದ ಚಂದಾ ಯಾದವ್ ಮತ್ತು ರಾಗಿಣಿ ಯಾದವ್ ಅವರನ್ನೂ ಪ್ರಕರಣದಲ್ಲಿ ಹೆಸರಿಸಲಾಗಿದೆ ಎನ್ನಲಾಗುತ್ತಿದೆ.