ಪುಣೆ, ಡಿ 27 (DaijiworldNews/DB): ಮಹಾರಾಷ್ಟ್ರ-ಕರ್ನಾಟಕ ನಡುವಿನ ಗಡಿ ವಿವಾದ ವಿಚಾರವಾಗಿ ಗಡಿ ಭಾಗದ ನಿವಾಸಿಗಳಿಗೆ ಒಗ್ಗಟ್ಟು ಪ್ರದರ್ಶಿಸುವ ಇಂದು ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸುವುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಲಾಗುವುದು. ಆ ಮೂಲಕ ವಿವಾದಿತ ಗಡಿ ಭಾಗದ ನಿವಾಸಿಗಳಿಗೆ ಒಗ್ಗಟ್ಟು ಪ್ರದರ್ಶಿಸಲಾಗುವುದು ಎಂದರು.
ಕರ್ನಾಟಕದಲ್ಲಿ ಮರಾಠಿಗರಿರುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂಬ ಉದ್ದವ್ ಠಾಕ್ರೆ ಹೇಳಿಕೆ ವಿರುದ್ದ ಹರಿಹಾಯ್ದ ಅವರು, ಬೇರೆಯವರಿಂದ ನಮಗೆ ಪಾಠ ಅನಗತ್ಯ. ಗಡಿ ಪ್ರದೇಶದ ನಿವಾಸಿಗಳೊಂದಿಗೆ ನಾವಿದ್ದೇವೆ. ಅವರ ಸಂಕಷ್ಟವನ್ನು ಅರ್ಥ ಮಾಡಿಕೊಂಡಿದ್ದೇವೆ ಎಂದರು.