ನವದೆಹಲಿ, ಡಿ 27 (DaijiworldNews/HR): ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಪರಿಸರ ಸೂಕ್ಷ್ಮ ವಲಯಗಳನ್ನು (ಇಎಸ್ಜೆಡ್) ಜಾರಿಗೊಳಿಸುವುದನ್ನು ವಿರೋಧಿಸಿ ಅರಣ್ಯ ಪ್ರದೇಶಗಳಿಗೆ ಸಮೀಪವಿರುವ ಪ್ರದೇಶಗಳ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಚರ್ಚೆ ಮಹತ್ವ ಪಡೆದಿದೆ.
ಇನ್ನು ಉತ್ತರದ ಕಾಸರಗೋಡಿನಿಂದ ದಕ್ಷಿಣದ ತಿರುವನಂತಪುರಕ್ಕೆ ಸಂಪರ್ಕ ಕಲ್ಪಿಸುವ ಸಿಲ್ವರ್ಲೈನ್, ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ವಿಳಂಬ ಮತ್ತು ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದಲ್ಲಿನ ಆರ್ಥಿಕ ಬಿಕ್ಕಟ್ಟು ಚರ್ಚೆಯ ವಿಷಯವಾಗಿವೆ ಎಂದು ಮೂಲಗಳು ತಿಳಿಸಿವೆ.