ಶ್ರೀನಗರ, ಡಿ 28 (DaijiworldNews/DB): ಇಂದು ಮುಂಜಾನೆ ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಬುಧವಾರ ಮುಂಜಾನೆ ಟ್ರಕ್ವೊಂದು ಸಂಚರಿಸುತ್ತಿರುವಾಗ ಸಂಶಯ ಬಂದ ಹಿನ್ನೆಲೆಯಲ್ಲಿ ಪೊಲೀಸರು ಟ್ರಕ್ನ್ನು ತಡೆದು ನಿಲ್ಲಿಸಿದಾಗ ಅದರೊಳಗೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತತ್ಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆ ಸಿಬಂದಿ ಉಗ್ರರತ್ತ ಪ್ರತಿದಾಳಿ ನಡೆಸಿದ್ದಾರೆ. ಕೆಲವು ಸಮಯದವರೆಗೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಎನ್ಕೌಂಟರ್ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದಾರೆ ಎಂದು ಎಡಿಜಿಪಿ ಮುಕೇಶ್ ಸಿಂಗ್ ತಿಳಿಸಿದ್ದಾರೆ.
ಪೂಂಚ್ನಲ್ಲಿಯೂ ಇತ್ತೀಚೆಗೆ ಪೊಲೀಸರು ಮತ್ತು ಭದ್ರತಾ ಪಡೆ ಸಿಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆರೆ ಹಿಡಿದಿದ್ದರು. ಅಲ್ಲದೆ ಅವರಿಂದ ಪಿಸ್ತೂಲ್, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು.