ನವದೆಹಲಿ, ಡಿ 29 (DaijiworldNews/HR): ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.
ಭಾರತ್ ಜೋಡೊ ಯಾತ್ರೆಗೆ ಕಾಂಗ್ರೆಸ್ ಆಹ್ವಾನ ಬಂದಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಯಾವುದೇ ಆಹ್ವಾನ ಬಂದಿಲ್ಲ, ನಮ್ಮ ಸಿದ್ಧಾಂತ ವಿಭಿನ್ನವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದರು.
ಇನ್ನು ಕಾಂಗ್ರೆಸ್ನ ಭಾರತ ಜೋಡೊ ಯಾತ್ರೆ ಜನವರಿ 3 ರಂದು ಉತ್ತರ ಪ್ರದೇಶವನ್ನು ಪ್ರವೇಶಿಸಲಿದ್ದು, ಈ ಪ್ರಯಾಣವು ಗಾಜಿಯಾಬಾದ್ ಲೋನಿಯಿಂದ ಪ್ರಾರಂಭವಾಗಿ ವಿವಿಧ ನಗರಗಳ ಮೂಲಕ ಚಲಿಸಲಿದೆ.