ನವದೆಹಲಿ, ಡಿ 30 (DaijiworldNews/DB): ಇಂದು ನಿಧನರಾದ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ತಮ್ಮ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಪಶ್ಚಿಮ ಬಂಗಾಳದಲ್ಲಿನ ಸುಮಾರು 7,800 ಕೋಟಿ ರೂಪಾಯಿಗಳ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.
ಪಶ್ಚಿಮ ಬಂಗಾಳದಲ್ಲಿ ಯೋಜನೆಗಳ ಉದ್ಘಾಟನೆಗಾಗಿ ಇಂದು ಬೆಳಗ್ಗೆಯೇ ಮೋದಿ ತೆರಳಬೇಕಿತ್ತಾದರೂ, ತಾಯಿಯ ನಿಧನದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪ್ರವಾಸ ರದ್ದುಪಡಿಸಿ ಅಹಮದಾಬಾದ್ಗೆ ತೆರಳಿದ್ದರು. ಹೀಗಾಗಿ ತಾಯಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ ವೀಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗಳಿಗೆ ಚಾಲನೆ ನೀಡಿದರು.