ಮಂಡ್ಯ ಡಿ 30 ( DaijiworldNews/MS): ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು ದೇಶದ ಪ್ರತಿ ಪಂಚಾಯತ್ನಲ್ಲಿ ಪ್ರೈಮರಿ ಹಾಲಿನ ಡೇರಿ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೇರಿ ನಿರ್ಮಿಸಲಾಗುವುದು. ಆ ಮೂಲಕ, ದೇಶದಿಂದ ಹಾಲು ರಫ್ತು ಮಾಡಲಾಗುವುದು. ಕರ್ನಾಟಕದಲ್ಲಿ ಹೈನು ಉದ್ಯಮ ಅಭಿವೃದ್ಧಿಗೆ ಬೇಕಾಗುವ ತಾಂತ್ರಿಕ ಸೌಲಭ್ಯ, ಸಹಕಾರಿ ಕ್ಷೇತ್ರಕ್ಕೆ ಬೇಕಾಗುವ ಎಲ್ಲ ನೆರವನ್ನು ಸಹಕಾರ ಸಚಿವಾಲಯದಿಂದ ಒದಗಿಸಲಾಗುವುದು ಎಂದು ಹೇಳಿದರು
ಈ ವೇಳೆ ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮನ್ಮೂಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮನ್ ಮೂಲ್ ಪ್ರಗತಿ ಪ್ರಥ ಪುಸ್ತಕವನ್ನು ಕೇಂದ್ರ ಸಹಕಾರ ಸಚಿವರು ಬಿಡುಗಡೆ ಮಾಡಿದರು.