ಚಿಂದ್ವಾರ, ಡಿ 31 ( DaijiworldNews/MS): ಭಗವಾನ್ ಶ್ರೀರಾಮ ಮತ್ತು ಹನುಮಾನ್ ಮೇಲಿನ ಭಕ್ತಿ ಬಿಜೆಪಿಯ ಹಕ್ಕುಸ್ವಾಮ್ಯವಲ್ಲ ಎಂದು ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಸ್ವಪಕ್ಷದ ವಿರುದ್ದ ಕಿಡಿಕಾರಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಕಾಂಗ್ರೆಸ್ ಮುಖಂಡ ಹನುಮ ಮಂದಿರ ನಿರ್ಮಿಸುತ್ತಿರುವ ಬಗ್ಗೆ, ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ. ಒಂದು ದಿನ ಹಿಂದಷ್ಟೆ ಉಮಾ ಭಾರತಿಯವರು "ಬಿಜೆಪಿ ಕಾರ್ಯಕರ್ತರು ತಾವು ಯಾರಿಗೆ ಮಾತದಾನ ಮಾಡಬೇಕು ಎನ್ನುವುದರ ಬಗ್ಗೆ ಯೋಚನೆ ಮಾಡಬೇಕು" ಎಂದು ಹೇಳಿಕೆ ನೀಡಿದ್ದರು.
"ಭಗವಾನ್ ರಾಮನು ಕೂಡ ತನ್ನ ವನವಾಸದ ಸಮಯದಲ್ಲಿ ಆಯುಧಗಳನ್ನು ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದನು" ಎಂದು ಅವರು ಹೇಳಿದರು, ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವುದು ತಪ್ಪಲ್ಲ, ಆದರೆ ಹಿಂಸಾತ್ಮಕ ಆಲೋಚನೆಗಳನ್ನು ಹೊಂದಿರುವುದು ತಪ್ಪು ಎಂದು ಹೇಳಿದ್ದರು.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಮದ್ಯದಂಗಡಿಗೆ ಕಲ್ಲು ತೂರಾಟ ನಡೆಸಿ ಉಮಾ ಭಾರತಿ ಸುದ್ದಿಯಾಗಿದ್ದರು. ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಉನ್ನತ ನಾಯಕರಲ್ಲಿ ಒಬ್ಬರಾಗಿರುವ ಉಮಾಭಾರತಿಯವರನ್ನು ಬದಿಗಿಟ್ಟಿದ್ದಕ್ಕಾಗಿ ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತದೆ.