ನವದೆಹಲಿ, ಡಿ 31 (DaijiworldNews/HR): ನೆರೆಯ ರಾಷ್ಟ್ರಗಳೊಂದಿಗೆ ನಾವು ಉತ್ತಮ ಸಂಬಂಧವನ್ನು ಬಯಸುತ್ತೇವೆ. ಆದರೆ ಭಯೋತ್ಪಾದನೆಯನ್ನು ಎಂದಿಗೂ ಕ್ಷಮಿಸಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನೆರೆಯ ರಾಷ್ಟ್ರಗಳೊಂದಿಗೆ ನಾವು ಒಳ್ಳೆಯ ಸಂಬಂಧ ಬಯಸಿದರೂ ನಮ್ಮ ಮೇಲಾಗಿರುವ ಭಯೋತ್ಪಾದನೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವುದೇ ರಾಷ್ಟ್ರ ನೊಂದಿಲ್ಲ ಎಂದರು.
ಇನ್ನು ಚೀನಾದೊಂದಿಗಿನ ಸಂಬಂಧಗಳು ಸಾಮಾನ್ಯವಾಗಿಲ್ಲ ಏಕೆಂದರೆ ಎಲ್ಎಸಿ ಪ್ರದೇಶವನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.