ಬೆಂಗಳೂರು, ಡಿ 31 (DaijiworldNews/HR): ಭಾರತ ದೇಶವನ್ನು ಉಳಿಸಲು, ಬೆಳಸಲು, ಉಜ್ವಲ ಭವಿಷ್ಯ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರೊಂದಿಗೆ ಶನಿವಾರ ಬೂತ್ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಸದಸ್ಯರಾಗಿ ಕೆಲಸ ಮಾಡುತ್ತಿರುವುದು ನಮ್ಮೆಲ್ಲರ ಅದೃಷ್ಟ ಎಂದರು.
ಇನ್ನು ವಿಶ್ವದ ಅತಿ ದೊಡ್ಡ ಪಕ್ಷ ಬಿಜೆಪಿ ಚೈನಾದ ಕಮ್ಯುನಿಸ್ಟ್ ಪಕ್ಷಕ್ಕಿಂತ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿ ಕೇವಲ ಸಂಖ್ಯೆಯಲ್ಲಿ ಮಾತ್ರ ದೊಡ್ಡದಲ್ಲದೆ, ವಿಚಾರದಲ್ಲಿಯೂ ದೊಡ್ಡದು ಎಂದು ಹೇಳಿದ್ದಾರೆ.