ವಿಜಯನಗರ, ಜ 03 ( DaijiworldNews/MS): ಜನವರಿ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಯೋಜಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದ ಅವರು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು, ಹೀಗಾಗಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಅಂತಿಮವಾಗಿ ಮತದಾರರ ನಿರ್ಧಾರವೇ ಅಂತಿಮ. ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ನೂರಕ್ಕೆ ನೂರರಷ್ಟು ಚುನಾವಣೆಯಲ್ಲಿ ಗೆಲ್ಲಲಿದೆ. ಯಾರೇ ಹೊಸ ಪಕ್ಷ ಸ್ಥಾಪಿಸಲಿ ಅಥವಾ ಇನ್ನೇನಾದರೂ ಅವರು ಹೇಳಿಕೊಳ್ಳಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.