ನವದೆಹಲಿ, ಜ 03 (DaijiworldNews/HR): ದೆಹಲಿಯಲ್ಲಿ ಕಾರು ಎಳೆದೊಯ್ದು ಮೃತಪಟ್ಟ ಯುವತಿಯ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಗರದ ಹೊರಭಾಗದ ಸುಲ್ತಾನ್ಪುರಿಯಲ್ಲಿನ ಭಾನುವಾರ ನಡೆದ ಭೀಕರ ಅಪಘಾತ ನಡೆದು ಮೃತದೇಹವನ್ನು ಕಾರಿನಡಿ ಸುಮಾರು 4 ಕಿ.ಮೀ.ವರೆಗೂ ಎಳೆದೊಯ್ದಿರುವ ಘಟನೆಯನ್ನು ನಾಚಿಕೆಗೇಡು ಎಂದು ಕರೆದಿರುವ ಕೇಜ್ರಿವಾಲ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ವಿರುದ್ಧ ಹೋರಾಡಲು ಸರ್ಕಾರವು ಉತ್ತಮ ವಕೀಲರನ್ನು ನೇಮಿಸುತ್ತದೆ ಎಂದಿದ್ದಾರೆ.
ಇನ್ನು ಸಂತ್ರಸ್ತೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆಕೆಯ ಚಿಕಿತ್ಸೆಯ ವೆಚ್ಚವನ್ನು ದೆಹಲಿ ಸರ್ಕಾರ ಭರಿಸಲಿದೆ. ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು. ಸಂತ್ರಸ್ತೆಯ ಕುಟುಂಬದ ಜೊತೆಗಿದ್ದೇನೆ, ಭವಿಷ್ಯದಲ್ಲಿ ಉದ್ಭವಿಸುವ ಯಾವುದೇ ಅಗತ್ಯವನ್ನು ನಾವು ಪೂರೈಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.