ಬೆಂಗಳೂರು, ಜ 04 ( DaijiworldNews/MS): ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.
'ನಡೆದಾಡುವ ದೇವರು, ಶತಮಾನದ ಸಂತ , ಪಾಂಡಿತ್ಯಪೂರ್ಣ ಪ್ರವಚನಕಾರರಾಗಿದ್ದ ಸಿದ್ಧೇಶ್ವರ ಸ್ವಾಮೀಜಿಯವರು ಸೋಮವಾರ ಸಂಜೆ ಲಿಂಗೈಕ್ಯರಾಗಿದ್ದರು. ಸ್ವಾಮೀಜಿ ಅವರ ಅಂತ್ಯ ಕ್ರಿಯೆಯುವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿ ಸ್ಪರ್ಶದೊಂದಿಗೆ ನೆರವೇರಿತು.