ನವದೆಹಲಿ, ಜ 04 ( DaijiworldNews/MS): ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿಯಾಗಿ ಡಿಜಿಟಲ್ ಇಂಡಿಯಾ ದೃಷ್ಟಿಕೋನದ ಕುರಿತು ಮಾತುಕತೆ ನಡೆಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ನಾದೆಲ್ಲಾ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು.
ಇದೇ ವೇಳೆ ಡಿಜಿಟಲೀಕರಣದತ್ತ ಕೇಂದ್ರ ಸರ್ಕಾರದ ಗಮನವನ್ನು ಶ್ಲಾಘಿಸಿರುವ ನಾದೆಲ್ಲಾ, "ದೂರದೃಷ್ಟಿವುಳ್ಳ ಸಭೆಗಾಗಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸುತ್ತೇನೆ. ಡಿಜಿಟಲ್ ರೂಪಾಂತರದ ಕಾಲಘಟ್ಟದಲ್ಲಿ ಸುಸ್ಥಿರ ಆರ್ಥಿಕ ಬೆಳವಣಿಗೆಯತ್ತ ಸರ್ಕಾರ ಹೆಚ್ಚು ಗಮನಹರಿಸುತ್ತಿರುವುದು ಶ್ಲಾಘನೀಯ. ಡಿಜಿಟಲ್ ಇಂಡಿಯಾ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಭಾರತಕ್ಕೆ ಸಹಾಯ ಮಾಡಲು ತಾವು ಎದುರು ನೋಡುತ್ತಿದ್ದೇವೆ" ಎಂದು ಚರ್ಚೆಯ ನಂತರ ನಾದೆಲ್ಲಾ ಟ್ವೀಟ್ ಮಾಡಿದ್ದಾರೆ.