ಬೆಂಗಳೂರು. ಜ 04 ( DaijiworldNews/MS): ವಿಧಾನಸೌಧದಲ್ಲಿ ದಾಖಲೆ ಇಲ್ಲದೆ ಹಣ ಸಾಗಾಟ ಸುಮಾರು 10.50 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಮಂಡ್ಯ ಮೂಲದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಜಗದೀಶ್ ಎಂಬಾವರು ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಬ್ಯಾಗ್ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ.
ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಜಗದೀಶ್ ನೀಡಿದ ಈ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು, ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವ್ಯಕ್ತಿ ಇಷ್ಟು ಮೊತ್ತದ ಹಣವನ್ನು ವಿಧಾನಸೌಧಕ್ಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದ ಎಂಬುವುದು ಇನ್ನೂ ದೃಢಪಟ್ಟಿಲ್ಲ. ಹಣದ ಮೂಲದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.