ಮಂಡ್ಯ, ಜ 04 ( DaijiworldNews/MS): ವಿರೋಧ ಪಕ್ಷಗಳನ್ನು ಎದುರಿಸಿ ರಾಜ್ಯದಲ್ಲಿ ಹೇಗೆ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಚನ್ನರಾಯಪಟ್ಟಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಪ್ರಬಲ ವಿರೋಧ ಪಕ್ಷಗಳನ್ನು ಎದುರಿಸಿ ನಮ್ಮ ಪಕ್ಷದ ಮುಖಂಡರು ಜಯಶಾಲಿಗಳಾಗಿದ್ದಾರೆ. ಎಂಪಿ, ಎಂಎಲ್ಸಿ ಚುನಾವಣೆಯಲ್ಲಿ ಹೆಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ವಿಜಯಿಗಳಾಗಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ತಮ್ಮ ಪುತ್ರ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರ ಪರ ಬ್ಯಾಟಿಂಗ್ ಮಾಡಿದ ಗೌಡರು, ನನ್ನ ಹಾಗೂ ಕುಮಾರಸ್ವಾಮಿಯ ರಾಜಕೀಯ ಹೇಳಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಚ್.ಡಿ.ಕುಮಾರಸ್ವಾಮಿ ಕೇವಲ ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.