ಬಿಹಾರ, ಜ 06 (DaijiworldNews/DB): ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಿದ ಮೂವರು ಅಪ್ರಾಪ್ತರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಹೌರಾ ಮತ್ತು ನ್ಯೂ ಜಲ್ಪೈಗುರಿ ರೈಲು ನಿಲ್ದಾಣಗಳ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30ರಂದು ಚಾಲನೆ ನೀಡಿದ್ದರು. ಉದ್ಘಾಟನೆಗೊಂಡು ಎರಡೇ ದಿನದಲ್ಲಿ ಬಿಹಾರದ ಕಿಶನ್ಗಂಜ್ ಜಿಲ್ಲೆಯಲ್ಲಿ ಕಿಡಿಗೇಡಿಗಳು ರೈಲಿಗೆ ಕಲ್ಲುತೂರಾಟ ನಡೆಸಿದ್ದರು. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ರೈಲ್ವೇ ಪೊಲೀಸರು ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ರೈಲಿಗೆ ಕಲ್ಲೆಸೆದ ಮೂವರು ಅಪ್ರಾಪ್ತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ಘಟನೆಗಳು ಪದೇ ಪದೇ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇಂತಹ ಘಟನೆಗಳು ಮರು ಕಳಿಸದಂತೆ ಜಾಗೃತಿ ಅಭಿಯಾನವನ್ನೂ ಪ್ರಾರಂಭಿಸಲಾಗಿದೆ. ಎಂದು ತಿಳಿದು ಬಂದಿದೆ.