ನವದೆಹಲಿ, ಜ 06 (DaijiworldNews/HR): ಭಾರತದ ಸಂವಿಧಾನವನ್ನು ಕಾಂಗ್ರೆಸ್ ಪಕ್ಷವು 70 ವರ್ಷಗಳ ಕಾಲ ರಕ್ಷಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬಿಹಾರದ ಬಾಂಕಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಕಳೆದ 70 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಧಾನಿ ಮೋದಿ ಯಾವಾಗಲೂ ಕೇಳುತ್ತಿರುತ್ತಾರೆ. ಕಾಂಗ್ರೆಸ್ ಸಂವಿಧಾನವನ್ನು ರಕ್ಷಿಸಿದೆ. ಆದ್ದರಿಂದಲೇ ನಿಮ್ಮಂತಹವರು ಪ್ರಧಾನಿಯಾಗಲು ಮತ್ತು ನನ್ನಂತಹ ಬಡ ವ್ಯಕ್ತಿಯ ಮಗ ಎಐಸಿಸಿ ಅಧ್ಯಕ್ಷರಾಗಲು ಸಾಧ್ಯವಾಯಿತು ಎಂದರು.
ಇನ್ನು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಯಾವುದೇ ಕೊಡುಗೆ ನೀಡಿಲ್ಲ, ಆ ಪಕ್ಷದ ಯಾವುದೇ ಕಾರ್ಯಕರ್ತರು ಜೈಲಿಗೆ ಹೋಗಿಲ್ಲ ಎಂದು ಟೀಕಿಸಿದ್ದಾರೆ.