ಹುಬ್ಬಳ್ಳಿ, ಜ 06 (DaijiworldNews/HR): ಭಾರತದಲ್ಲಿ ಭ್ರಷ್ಟಾಚಾರ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದೆ ಕಾಂಗ್ರೆಸ್ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಎಂದರೇನೆ ಭ್ರಷ್ಟಾಚಾರ ಪಕ್ಷವಾಗಿದ್ದು, ದೆಹಲಿಯಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮನೆಯ ಮುಂದೆ ಆ ಪಕ್ಷದ ನಾಯಕರು ಅಲೆದಾಡುವುದನ್ನು ನೋಡಿದರೆ ತಿಳಿಯುತ್ತದೆ ಎಂದರು.
ಇನ್ನು ಹಣ ತೆಗೆದುಕೊಂಡು ಟಿಕೆಟ್ ನೀಡುತ್ತಾರೆ. ಅವರ ಪಕ್ಷದಲ್ಲಿ ಗವರ್ನರ್ ಆದವರೇ ಈ ರೀತಿ ಹೇಳುತ್ತಿದ್ದಾರೆ. ದೇಶದಲ್ಲಿ ಭ್ರಷ್ಟಾಚಾರ ರಕ್ತ ಬೀಜಾಸುರರನ್ನು ಹುಟ್ಟಿಸಿದ್ದೆ ಕಾಂಗ್ರೆಸ್. ಪ್ರಿಯಾಂಕ ಖರ್ಗೆ ಬಹಳ ಮಾತನಾಡಿದರೆ ರಾಷ್ಟ್ರೀಯ ನಾಯಕ ಆಗಬಹುದು ಎಂದು ತಿಳಿದುಕೊಂಡಿದ್ದಾರೆ ಎಂದಿದ್ದಾರೆ.