ನವದೆಹಲಿ, ಜ 06 (DaijiworldNews/HR): ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಮುಂಬೈ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗದ ರಾವತ್ ವಿರುದ್ಧ ನ್ಯಾಯಾಲಯ ಶುಕ್ರವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇನ್ನು ಮುಂದಿನ ವಿಚಾರಣೆಯನ್ನ ಜನವರಿ 28ಕ್ಕೆ ಮುಂದೂಡಿದದು, ನ್ಯಾಯಾಲಯದ ಆದೇಶದ ಹೊರತಾಗಿಯೂ ರಾವತ್ ಹಾಜರಾಗಲಿಲ್ಲ ಎಂದು ಮೇಧಾ ಸೋಮಯ್ಯ ಅವರ ವಕೀಲರು ಹೇಳಿದರು.
ಜುಲೈ 2022 ರಲ್ಲಿ, ಮಜ್ಗಾಂವ್ನ ಮೆಟ್ರೋಪಾಲಿಟನ್ ನ್ಯಾಯಾಲಯವು ರಾವತ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.