ನವದೆಹಲಿ, ಜ 06 (DaijiworldNews/DB): ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಎಎಪಿ ಮತ್ತು ಬಿಜೆಪಿ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಯಿತು.
ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ನ (ಎಂಸಿಡಿ) ಚೊಚ್ಚಲ ಸಭೆ ಇಂದು ಆಯೋಜಿಸಲಾಗಿತ್ತು. ಇದರಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಬಿಜೆಪಿ ಮತ್ತು ಎಎಪಿ ನಡುವೆ ಘರ್ಷಣೆ ಏರ್ಪಟ್ಟ ಹಿನ್ನೆಲೆಯಲ್ಲಿ ಎಂಸಿಡಿ ಸದನ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮೇಯರ್ ಚುನಾವಣಾ ಪ್ರಕ್ರಿಯೆ ಮೇಲ್ವಿಚಾರಣೆ ವಹಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಕೌನ್ಸಿಲರ್ ಸತ್ಯ ಶರ್ಮಾ ತಿಳಿಸಿದ್ದಾರೆ.
ಶರ್ಮಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಆರಂಭಿಸಿದಾಗ ಎಎಪಿ ಕೌನ್ಸಿಲರ್ಗಳು ಮತ್ತು ಶಾಸಕರು ಅವರ ವಿರುದ್ದ ಘೋಷಣೆ ಕೂಗಿದರು. ಅಲ್ಲದೆ ಮೊದಲು ಚುನಾಯಿತ ಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಲು ಪಟ್ಟು ಹಿಡಿದರು. ಹೀಗಾಗಿ ಎಎಪಿ ಮತ್ತು ಬಿಜೆಪಿ ಸದಸ್ಯರ ನಡುವೆ ಘರ್ಷಣೆ ನಡೆಯಿತು.