ಚೆನ್ನೈ, ಜ 08 (DaijiworldNews/DB): ದ್ವಿಚಕ್ರ ವಾಹನಕ್ಕೆ ಕರ್ನಾಟಕ ರಾಜ್ಯ ಸಾರಿಗೆ ಬಸ್ ಢಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಭಾನುವಾರ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಬೈಕ್ಗೆ ಗುದ್ದಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಯಾಣಿಕರು ಸುರಕ್ಷಿತವಾಗಿ ಬಸ್ನಿಂದ ಹೊರಗೆ ಹಾರಿದ್ದಾರೆ. ಇನ್ನು ಸಾವನ್ನಪ್ಪಿದ ಬೈಕ್ ಸವಾರರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.