ಪಶ್ಚಿಮ ಬಂಗಾಳ, ಜ 08 (DaijiworldNews/DB): ಕಲ್ಲಿದ್ದಲು ಗಣಿ ಕುಸಿದು ಹಲವು ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕುಲ್ತಿಯಲ್ಲಿ ನಡೆದಿದೆ.
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ಗೆ (ಬಿಸಿಸಿಎಲ್) ಸೇರಿದ ಗಣಿಯಲ್ಲಿ ಘಟನೆ ಸಂಭವಿಸಿದೆ. ಗಣಿ ಛಾವಣಿ ಕುಸಿದಿರುವುದರಿಂದ ಹಲವರು ಅದರೊಳಗೆ ಸಿಲುಕಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇವರೆಲ್ಲ ಗಣಿಯಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದರು ಎಂದು ಆರೋಪ ಕೇಳಿ ಬಂದಿದೆ.
ಗಣಿಯಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಗಣಿ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಬಿರುಸುಗೊಂಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.