ಪುಣೆ, ಜ 09 ( DaijiworldNews/MS): ಕೊವ್ಯಾಕ್ಸಿನ್ ಲಸಿಕೆಗೆ ಮುಂದಿನ 10- 15 ದಿನದಲ್ಲಿ ಬೂಸ್ಟರ್ ಡೋಸ್ ಆಗಿ ಒಪ್ಪಿಗೆ ದೊರೆಯಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದಾರ್ ಪೂನಾವಾಲಾ ತಿಳಿಸಿದ್ದಾರೆ.
ಇಲ್ಲಿನ ಭಾರತಿ ವಿದ್ಯಾಪೀಠ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಈ ಲಸಿಕೆ ಕೊರೊನಾವೈರಸ್ನ ಓಮಿಕ್ರಾನ್ ರೂಪಾಂತರದ ವಿರುದ್ಧ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ . ಎಲ್ಲ ರೂಪಾಂತರಿ ವಿರುದ್ಧ ಪರಿಣಾಮಕಾರಿ ಕೆಲಸ ಮಾಡಲಿದೆ. ಕೇಂದ್ರ ಸರ್ಕಾರ ಬಳಿ ಅಗತ್ಯದಷ್ಟು ಕೋವಿಶೀಲ್ಡ್ ಲಸಿಕೆ ಇದ್ದು, ಯಾವುದೇ ಕೊರತೆಯಿಲ್ಲ. ಸದ್ಯಕ್ಕೆ ಸಿರಂ ಇದರ ಉತ್ಪಾದನೆ ಸ್ಥಗಿತಗೊಳಿಸಿದ್ದು, ಅಗತ್ಯವಿದ್ದರೆ ಪುನರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ 10-15 ದಿನಗಳಲ್ಲಿ ಕೊವ್ಯಾಕ್ಸಿನ್ ಅನ್ನು ಬೂಸ್ಟರ್ ಡೋಸ್ ಆಗಿ ಅನುಮೋದಿಸಲಾಗುತ್ತದೆ. ಇದು ವಾಸ್ತವವಾಗಿ ಅತ್ಯುತ್ತಮ ಬೂಸ್ಟರ್ ಆಗಿದೆ. ಏಕೆಂದರೆ ಇದು ಒಮಿಕ್ರಾನ್ ವಿರುದ್ಧ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ, ಕೋವಿಶೀಲ್ಡ್ ಗಿಂತ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಹೇಳಿದ್ದಾರೆ.