ಕೋಲಾರ, ಜ 09 ( DaijiworldNews/MS): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದ ಆಯ್ಕೆಗೆ ಕೊನೆಗೂ ತೆರೆಬಿದ್ದಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಕೈ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ನಗರದ ಮಿನಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿದ್ದ ಕೋಲಾರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಈ ನಿರ್ಧಾರ ಪ್ರಕಟಿಸಿ ನಿಮ್ಮ ಪ್ರೀತಿ ಅಭಿಮಾನ ತಿರಸ್ಕರಿಸಲು ಸಾಧ್ಯವಿಲ್ಲ ನನ್ನ ಸ್ಪರ್ಧೆಗೆ ಹೈಕಮಾಂಡ್ ತೀರ್ಮಾನ ಕೂಡ ಬೇಕಾಗುತ್ತದೆ ಎಂದು ತಮ್ಮ ಕ್ಷೇತ್ರದ ಆಯ್ಕೆಯನ್ನು ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ಹಲವು ತಿಂಗಳಿಂದ ಕ್ಷೇತ್ರ ಹುಡುಕಾಟದ ಕಸರತ್ತಿಗೆ ತೆರೆಬಿದ್ದಿದೆ.
ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.