ಬೆಂಗಳೂರು, ಜ 10 (DaijiworldNews/SM): ಮೆಟ್ರೋ ನಿರ್ಮಾಣ ಹಂತದ ಕಾಮಗಾರಿಯ ಪಿಲ್ಲರ್ ಕುಸಿದು ತಾಯಿ-ಮಗು ಮೃತಪಟ್ಟಿದ್ದಾರೆ. ಮೃತ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೆಟ್ರೊ 2ನೇ ಹಂತದ ಕಾಮಗಾರಿ ನಡೆಯುತ್ತಿದ್ದ ನಾಗವಾರ ಬಳಿ(ಹೆಣ್ಣೂರು ಕ್ರಾಸ್) ಮಂಗಳವಾರ ಬೆಳಗ್ಗೆ ಕಬ್ಬಿಣದ ಸರಳುಗಳ ಪಿಲ್ಲರ್ ಕುಸಿದು 23 ವರ್ಷದ ತೇಜಸ್ವಿನಿ ಮತ್ತು ಅವರ ಎರಡೂವರೆ ವರ್ಷದ ಕಂದಮ್ಮ ಮೃತಪಟ್ಟಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಘಟನೆ ಬಗ್ಗೆ ಮಾಹಿತಿ ಬಂದಿದೆ. ನಾಗವಾರದಲ್ಲಿ ಪಿಲ್ಲರ್ ಕಿಸಿದಿದೆ. ಗದಗದ ಹೆಣ್ಣು ಮಗು ಮೃತಪಟ್ಟಿದ್ದಾರೆ. ಇದು ದುರಾದೃಷ್ಟಕರ. ಈ ಘಟನೆ ಹೇಗೆ ನಡೆದಿದೆ ಎಂಬುದನ್ನು ವಿಚಾರಿಸಿ ತನಿಖೆ ನಡೆಸುತ್ತೇವೆ. ಘಟನೆಗೆ ಕಾರಣವಾದವರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.