ಕೊಲ್ಲಂ, ಜ 11 (DaijiworldNews/DB): 15,300 ಲೀಟರ್ ಕಲಬೆರಕೆ ಹಾಲು ಸಾಗಿಸುತ್ತಿದ್ದ ಟ್ಯಾಂಕರ್ನ್ನು ಹೈನುಗಾರಿಕೆ ಇಲಾಖೆಯು ಕೊಲ್ಲಂ ಆರ್ಯನಕಾವು ಗಡಿ ತಪಾಸಣಾ ಕೇಂದ್ರದಲ್ಲಿ ಬುಧವಾರ ವಶಪಡಿಸಿಕೊಂಡಿದೆ.
ಹೈಡ್ರೋಜನ್ ಪೆರಾಕ್ಸೈಡ್ನ್ನು ಹಾಲಿನಲ್ಲಿ ಮಿಶ್ರಣ ಮಾಡಿ ಸಾಗಾಟ ಮಾಡಲಾಗುತ್ತಿತ್ತು. ತಮಿಳುನಾಡಿನ ವಿರುದುನಗರ ಜಿಲ್ಲೆಯ ವಡಿಯೂರ್ ಗ್ರಾಮದಿಂದ ಪತ್ತನಂತಿಟ್ಟದ ಪಂದಳಂಗೆ ಟ್ಯಾಂಕರ್ ತೆರಳುತ್ತಿತ್ತು. ಪುನಲೂರಿನಲ್ಲಿ ಟ್ಯಾಂಕರ್ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹಾಲಿನಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಮಿಶ್ರಣಗೊಂಡಿರುವ ಶೇಕಡಾವಾರು ಪ್ರಮಾಣವನ್ನು ಪರೀಕ್ಷಿಸಲು ತಿರುವನಂತಪುರಂನ ಲ್ಯಾಬ್ಗೆ ಕಳುಹಿಸಲಾಗಿದೆ. ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುಂದೆ ಜಿಲ್ಲೆಯಲ್ಲಿ ತಪಾಸಣೆ ಹೆಚ್ಚಿಸಲಾಗುವುದು ಎಂದು ಕೊಲ್ಲಂನ ಆಹಾರ ಸುರಕ್ಷತಾ ಇಲಾಖೆಯ ನೋಡಲ್ ಅಧಿಕಾರಿ ಸುಜಿತ್ ತಿಳಿಸಿದ್ದಾರೆ.