ನವದೆಹಲಿ, ಜ 11 (DaijiworldNews/DB): ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಸಮಾರೋಪವು ಶ್ರೀನಗರದಲ್ಲಿ ಜನವರಿ 30ರಂದು ನಡೆಯಲಿದ್ದು, ಸಮಾರಂಭಕ್ಕೆ 21 ಪಕ್ಷಗಳನ್ನು ಕಾಂಗ್ರೆಸ್ ಆಹ್ವಾನಿಸಿದೆ.
ಈ ಕುರಿತು ಟ್ವಿಟರ್ನಲ್ಲಿ ಬುಧವಾರ ಮಾಹಿತಿ ನೀಡಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, 21 ಸಮಾನಮನಸ್ಕ ಪಕ್ಷಗಳ ಅಧ್ಯಕ್ಷರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪತ್ರ ಬರೆದಿದ್ದು, ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಮಾರೋಪ ಸಮಾರಂಭಕ್ಕೆ ಆಗಮಿಸಿ ಯಾತ್ರೆಯ ಸಂದೇಶವನ್ನು ದೇಶಾದ್ಯಂತ ಪಸರಿಸಬೇಕು. ನಿಮ್ಮ ಸಕಾರಾತ್ಮಕ ಪ್ರತಿಕ್ರಿಯೆಗಾಗಿ ನಾವೆಲ್ಲರೂ ಕಾಯುತ್ತಿದ್ದೇವೆ. ಶ್ರೀನಗರದಲ್ಲಿ ಜನವರಿ 30ರಂದು ಭೇಟಿಯಾಗೋಣ ಎಂದು ಖರ್ಗೆ ಬರೆದಿರುವುದಾಗಿ ಜೈರಾಮ್ ರಮೇಶ್ ತಿಳಿಸಿದ್ದಾರೆ.