ಚಂಡೀಗಢ, ಜ.12 (DaijiworldNews/HR): ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಗುರುವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಅಬ್ದುಲ್ (45), ಅವರ 40 ವರ್ಷದ ಪತ್ನಿ, 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಮತ್ತು 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ.
ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ನಗರದ ಜನವಸತಿ ಪ್ರದೇಶದಲ್ಲಿ ವಾಸವಿದ್ದ ಕುಟುಂಬ ಪಶ್ಚಿಮ ಬಂಗಾಳದಿಂದ ವಲಸೆ ಬಂದಿತ್ತು. ದಂಪತಿ ಪಾಣಿಪತ್ನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದರು.
ಇನ್ನು ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಅಗ್ನಿಶಾಮಕ ಸ್ಥಳಕ್ಕೆ ಬರುತ್ತಿದ್ದಂತೆಯೇ ಆರು ಜನ ಸುಟ್ಟು ಕರಕಲಾಗಿದ್ದಾರೆ.