ನವದೆಹಲಿ, ಜ 13 (DaijiworldNews/HR): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರ ನಿವಾಸಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ದೀರ್ಘಕಾಲದವರೆಗೆ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ ಶರದ್ ಯಾದವ್ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದು, ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಶರದ್ ಯಾದವ್ರ ನಿವಾಸಕ್ಕೆ ಭೇಟಿ ನೀಡಿದ್ದ ರಾಹುಲ್ಗಾಂಧಿ, ಗೌರವ ಸಲ್ಲಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ಗಾಂಧಿ, ಶರದ್ ಯಾದವರೊಂದಿಗೆ ತಾವು ಕಾರು ಪ್ರಯಾಣ ಮಾಡುತ್ತಲೇ ಸಂವಾದ ನಡೆಸಿದ್ದನ್ನು, ಅಂದಿನಿಂದ ಅವರೊಂದಿಗೆ ಆಪ್ತ ಸಂಬಂಧ ಆರಂಭಿಸಿದ್ದನ್ನು ಸ್ಮರಿಸಿಕೊಂಡಿದ್ದಾರೆ.