ಪಂಜಾಬ್ , ಜ 14 ( DaijiworldNews/MS): ಪಂಜಾಬ್ ನ ಲೂಧಿಯಾನದಲ್ಲಿ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಸಾಗುತ್ತಿದ್ದ ವೇಳೆ ಶನಿವಾರ ಬೆಳಗ್ಗೆ ಹೆಜ್ಜೆ ಹಾಕುತ್ತಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.
ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ನಿಧನ ಕುರಿತು ಸಿಎಂ ಭಗವಂತ್ ಮಾನ್ ಟ್ವೀಟ್್ ಮಾಡಿ ಸಂತಾಪ ಸೂಚಿಸಿದ್ದಾರೆ. ಜಲಂಧರ್ ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅಕಾಲಿಕ ಮರಣದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.
ಸದ್ಯಕ್ಕೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.