ಜೋಧ್ಪುರ, ಜ 14 (DaijiworldNews/DB): ಭದ್ರತಾ ಶಿಷ್ಟಾಚಾರ ಉಲ್ಲಂಘನೆ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಾದ ಸ್ಪರ್ಶಿಸಲು ಯತ್ನಿಸಿದ ರಾಜಸ್ಥಾನದ ಸರ್ಕಾರಿ ಎಂಜಿನಿಯರ್ವೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಪಿಎಚ್ಇಡಿಯಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ಅಂಬಾ ಸಿಯೋಲ್ ಅಮಾನತಾದವರು. ಜನವರಿ 4ರಂದು ರೋಹೆತ್ನಲ್ಲಿ ನಡೆದ ಸ್ಕೌಟ್ ಗೈಡ್ ಜಾಂಬೋರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ಅಂಬಾ ಸಿಯೋಲ್ ಭದ್ರತಾ ನಿಯಮ ಉಲ್ಲಂಘಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಾದ ಸ್ಪರ್ಶಿಸಲು ಮುಂದಾಗಿದ್ದರು.
ಇದೀಗ ಗೃಹ ಸಚಿವಾಲಯದ ಮಧ್ಯಪ್ರವೇಶದ ನಂತರ ಅಂಬಾ ಸಿಯೋಲ್ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ವಿಭಾಗವು ಆದೇಶಿಸಿದೆ. ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕಾಗಿ ರಾಜಸ್ಥಾನದ ನಾಗರಿಕ ಸೇವಾ ನಿಯಮದ ಅಡಿಯಲ್ಲಿ ಈ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ ಎಂಜಿನಿಯರ್ (ಆಡಳಿತ) ಅವರ ಆದೇಶದಲ್ಲಿ ತಿಳಿಸಲಾಗಿದೆ.