ಚೆನ್ನೈ, ಜ 15 (DaijiworldNews/DB): ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕಾನೂನು ಬಾಹಿರ ನಡವಳಿಕೆ ತೋರಿದ್ದರಿಂದ ಶಿವಾಜಿ ಕೃಷ್ಣಮೂರ್ತಿ ಅವರನ್ನು ಅಮನತು ಮಾಡಲಾಗಿದೆ. ಇದು ತಾತ್ಕಾಲಿಕ ಜಾರಿಯಲ್ಲಿರುತ್ತದೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.
ರಾಜ್ಯಪಾಲರನ್ನು ಪಕ್ಷ ಗೌರವದಿಂದ ಕಾಣುತ್ತದೆ. ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ಅವರ ವೈಯಕ್ತಿಕ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಎಂಕೆ ಸ್ಪಷ್ಟಪಡಿಸಿದೆ.
ಸರ್ಕಾರ ಸಿದ್ದಪಡಿಸಿದ ಭಾಷಣವನ್ನು ನಿಮಗೆ ಓದಲು ಸಾಧ್ಯವಾಗದಿದ್ದರೆ ನೀವು ಕಾಶ್ಮೀರಕ್ಕೆ ಹೋಗಿ. ಅಲ್ಲಿಗೆ ನಾವು ಉಗ್ರರನ್ನು ಕಳುಹಿಸುತ್ತೇವೆ. ನಿಮ್ಮನ್ನವರು ಗುಂಡಿಕ್ಕಿ ಕೊಲ್ಲುತ್ತಾರೆ ಎಂದು ವಿವಾದಾತ್ಮಕವಾಗಿ ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ನೀಡಿದ್ದರು.