ವಿಜಯಪುರ, ಜ 16 (DaijiworldNews/HR): ಐತಿಹಾಸಿಕ ಕಾರ್ಯಕ್ರಮ ಮಾಡಿಯೇ ತಿಳಿಯದ ಗಾಂಧಿ ಕುಟುಂಬದ ಮನೆ ಬಾಗಿಲು ಕಾಯುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಕಾರ್ಯಕ್ರಮ ಟೀಕಿಸುವ ನೈತಿಕತೆ ಇಲ್ಲ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ-ಶಾಸಕ ಪಿ.ರಾಜೀವ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪರಿಶಿಷ್ಟರ ಮೀಸಲಾತಿ ಪ್ರಮಾಣ ಹೆಚ್ಚಳದ ವಿಷಯದಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದ್ದು, ಸದಾಶಿವ ವರದಿ ಬಹಿರಂಗವಾಗಲಿ ಎಂದು ನಾವೂ ಆಗ್ರಹಿಸಿದ್ದೇವೆ. ಇದಕ್ಕಾಗಿ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದ್ದು, ಶೀಘ್ರವೇ ವರದಿ ಸಿಗಲಿದೆ ಎಂದರು.
ಇನ್ನು ಸಾಮಾಜಿಕ ನ್ಯಾಯದ ಪರವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಲಿತರಿಗೆ ಮೀಸಲು ಪ್ರಮಾಣ ಹೆಚ್ಚಿಸಿದೆ. ನಾಗಮೋಹನ ದಾಸ ವರದಿಯನ್ನು ಒಪ್ಪಿಕೊಂಡು, ಪರಿಶಿಷ್ಟ ಜಾತಿ ಮೀಸಲು ಪ್ರಮಾಣ ಶೇ. 17 ಕ್ಕೆ ಏರಿಕೆ ಮಾಡಿ, ಬದ್ದತೆ ತೋರಿದ್ದಾರೆ ಎಂದಿದ್ದಾರೆ.