ಜುಂಜುನು, ಜ 16 (DaijiworldNews/HR): ರಾಜಸ್ಥಾನದ ಜುಂಜುನು ಜಿಲ್ಲೆಯ ಉದಯಪುರವತಿ ಪಟ್ಟಣದಲ್ಲಿ ಯುವಕನೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ನಡೆದಿದೆ.
ಮದ್ಯಪಾನ ಮಾಡಿದ ಯುವಕನೊಬ್ಬ ಶಿವನ ದೇವಸ್ಥಾನದಲ್ಲಿ (ಉದಯಪುರವತಿ ಶಿವ ಮಂದಿರ) ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಯುವಕನನ್ನು ಹಿಡಿದು ಮರಕ್ಕೆ ಬಿಗಿದು ಥಳಿಸಿದ್ದಾರೆ.
ಇನ್ನು ಯುವಕ ಸಂಪೂರ್ಣವಾಗಿ ಕುಡಿದ ಅಮಲಿನಲ್ಲಿ ಕೃತ್ಯ ಎಸಗಿದ್ದ. ಈತ ನಿತ್ಯ ಗಲಾಟೆ ಮಾಡುತ್ತಿದ್ದಾನೆ ಮತ್ತು ಈ ಪ್ರದೇಶದಲ್ಲಿ ಶಾಂತಿ ಕದಡುವ ಇಂತಹ ಕೃತ್ಯಗಳನ್ನು ಮಾಡುತ್ತಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.