ಚಿತ್ರದುರ್ಗ, ಜ 30 (DaijiworldNews/HR): ಚಿತ್ರದುರ್ಗದಲ್ಲಿ ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಭಾನುವಾರ ಚಳ್ಳಕೆರೆ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಬಸವರಾಜ ಮಂಡಿಮಠಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಬಸವರಾಜ್ ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.