ಹುಬ್ಬಳ್ಳಿ, ಫೆ 16 (DaijiworldNews/MS): ದೇಶದಲ್ಲಿ ಬಿಜೆಪಿ ಹೊಡಿ, ಬಡಿ, ಕಡಿ ಎನ್ನುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿದ್ದು, ಅವರು ಮತ್ತೆ ಅಧಿಕಾರಕ್ಕೇರಿದರೆ ನಾಗರಿಕ ದಂಗೆ ಪ್ರಾರಂಭವಾಗುವುದು ಖಚಿತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದರು.
ಈ ಬಾರಿ ಭಾರತೀಯ ಜನತಾ ಪಕ್ಷವನ್ನು ಸೋಲಿಸಿದೋದೇ ಗುರಿಯಾಗಿರಬೇಕು. ನೀವೆಲ್ಲರೂ ಕಾಂಗ್ರೆಸ್ ಸೇರಿದ್ದು ಒಳ್ಳೆದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಕರೆ ನೀಡಿದರು.
ಬಿಜೆಪಿಯವರು ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಸಾಮರಸ್ಯ ಹಾಳುಗೆಡವಿ ಅಶಾಂತಿ ಮೂಡಿಸುವುದೇ ಅವರ ಉದ್ದೇಶ. ಮತ್ತೆ ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ ಪ್ರಾರಂಭವಾಗಲಿದೆ. ದ್ವೇಷ ಸಾಧಿಸುವ ಇಂತಹವರು ಮತ್ತೆ ಅಧಿಕಾರಕ್ಕೆ ಏರಬೇಕಾ ಎಂದು ಪ್ರಶ್ನಿಸಿದರು.