ಬೆಂಗಳೂರು, ಫೆ 17 (DaijiworldNews/MS): 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲಿಗೆ ಈ ಬಾರಿಯ ಬಜೆಟ್ ಬಹಳ ಪ್ರಾಮುಖ್ಯತೆ ಪಡೆದಿದೆ.
ಇನ್ನು ವಿಧಾನಸೌಧಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ, ಬಜೆಟ್ ಪುಸ್ತಕವನ್ನು ಪ್ರದರ್ಶಿಸಿದ್ದು, ಕೆಲವೇ ಕ್ಷಣಗಳಲ್ಲಿ ಬೆಳಗ್ಗೆ 10.45 ಕ್ಕೆ ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ 2023-24 ಆಯವ್ಯಯ ಪತ್ರಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆಯಲಿದ್ದಾರೆ.
ವಿಧಾನಸಭಾ ಚುನಾವಣೆ ತೀರಾ ಸನಿಹದಲ್ಲಿರುವ ಕಾರಣ ಈ ಬಾರಿ ಮುಖ್ಯಮಂತ್ರಿಗಳು ಮತದಾರರ ಒಲೈಕೆಯತ್ತ ಗಮನ ಹರಿಸುತ್ತಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ. ರೈತರು, ಬಡವರು, ಮಹಿಳೆಯರು ಹಾಗೂ ಸಾಮಾನ್ಯ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಸಿಎಂ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.