ಬೆಂಗಳೂರು, ಫೆ 17 (DaijiworldNews/MS): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ಘೋಷಣೆಗಳನ್ನು ಮಾಡಿದ್ದಾರೆ.
ಆರೋಗ್ಯ ಕ್ಷೇತ್ರದ ಹೈಲೈಟ್ಸ್:
- ಕರ್ನಾಟಕ ಮೆಂಟಲ್ ಹೆಲ್ತ್ ಯೋಜನೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲು ನಿರ್ಧಾರ
ಎಲ್ಲಾ ಜಿಲ್ಲೆಗಳಲ್ಲಿ Hand Held X-ray ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ & ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ.
ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು 'ಜೀವಸುಧೆ' ಎಂಬ ವ್ಯಾಪಕ ತಪಾಸಣಾ ಕಾರ್ಯಕ್ರಮ
- ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ
- ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು.
ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು
ಸ್ಥಾಪನೆ
- ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಎಂದು ಪುನರ್ ರಚನೆ
- ಮನೆ ಮನೆಗೆ ಆರೋಗ್ಯ' ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜನೆ
- ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು.
- ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
- ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಸ್ಥಾಪಿಸಲಾಗುವುದು.
- ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ