ಬೆಂಗಳೂರು, ಫೆ 17 (DaijiworldNews/MS): 2023ರ ಕರ್ನಾಟಕದ ಬಜೆಟ್ ಮಂಡನೆ ಮುಗಿದಿದೆ. ಬಜೆಟ್ ಮುಕ್ತಾಯದ ಬಳಿಕ ವಿಧಾನಸಭೆಯಿಂದ ಹೊರ ತೆರಳುವ ವೇಳೆ ಡಿಕೆ ಶಿವಕುಮಾರ್ ಕಿವಿಯಲ್ಲಿ ಹೂವು ಇರಿಸಿಕೊಂಡೇ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಡಿಕೆ ಶಿವಕುಮಾರ್ , ಸಿಎಂ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್, ಬಿಸಿಲು ಕುದುರೆಯಿದ್ದಂತೆ. ಕಣ್ಣಿಗೂ ಕಾಣದು, ಯಾರ ಕೈಗೂ ಸಿಗದು ಎಂದು ಹೇಳಿದ್ದಾರೆ
ಬಿಜೆಪಿಯವರ ಡಬಲ್ ಇಂಜಿನ್ ಕಟ್ಟು ನಿಂತು ಹೊಗೆ ಬರುತ್ತಿದೆ. ಬೊಮ್ಮಾಯಿ ಅವರು ತಾವೂ ಒಂದು ಬಜೆಟ್ ಮಂಡಿಸಿದ್ದೇವೆ ಎಂದು ಹೇಳಿಕೊಳ್ಳಲು ಇದರ ಪ್ರತಿಯನ್ನು ಮನೆಯಲ್ಲಿ ಶೋ ಕೇಸ್ ನಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ ಎಂದು ಲೇವಡಿ ಮಾಡಿದರು.